ರಾಷ್ಟ್ರಪತಿ ಭಾಷಣಕ್ಕೆ ಗೈರಾಗಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ನಿರ್ಧಾರ
ಭಾಷಣವನ್ನು ಬಹಿಷ್ಕರಿಸಲು ಕಾಂಗ್ರೆಸ್, ಶಿವಸೇನಾ, ಟಿಎಂಸಿ, ಎನ್ಸಿಪಿ, ಬಿಎಸ್ಪಿ ಸೇರಿದಂತೆ ಒಟ್ಟು ಹದಿನಾರು ವಿರೋಧ ಪಕ್ಷಗಳು ತೀರ್ಮಾನಿಸಿದೆ.

ನವದೆಹಲಿ: ಸಂಸತ್ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಾಡುವ ಭಾಷಣಕ್ಕೆ ಗೈರಾಗಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ತೀರ್ಮಾನಿಸಿ ನಿರ್ಧರಿಸಿದ್ದಾರೆ.
ಶುಕ್ರವಾರ ತಮ್ಮ ಅಧಿಕೃತ ಟ್ವಟಿರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, 'ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ಬೆಂಬಲ ಸೂಚಿಸುವುದಕ್ಕಾಗಿ ಸಂಸತ್ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾಡುವ ಭಾಷಣಕ್ಕೆ ಹಾಜರಾಗದಿರಲು ನಿರ್ಧರಿಸಿದ್ದೇನೆ. ಜೆಡಿಎಸ್ ಪಕ್ಷದೊಂದಿಗೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಂಡಿದ್ದೇನೆ' ಎಂದು ತಿಳಿಸಿದ್ದಾರೆ.
In solidarity with my farmer brothers fighting against the three #FarmLaws, I have decided, after consulting my party @JanataDal_S units, not to attend the President's joint address of Parliament today.
— H D Devegowda (@H_D_Devegowda) January 29, 2021
ಸಂಸತ್ತಿನ ಬಜೆಟ್ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಮಾಡಲಿರುವ ಭಾಷಣವನ್ನು ಬಹಿಷ್ಕರಿಸಲು ಕಾಂಗ್ರೆಸ್, ಶಿವಸೇನಾ, ಟಿಎಂಸಿ, ಎನ್ಸಿಪಿ, ಬಿಎಸ್ಪಿ ಸೇರಿದಂತೆ ಒಟ್ಟು ಹದಿನಾರು ವಿರೋಧ ಪಕ್ಷಗಳು ತೀರ್ಮಾನ ಮಾಡಿವೆ.