Monday, March 27, 2023

ರಾಕ್​​ಲೈನ್​ ವೆಂಕಟೇಶ್​ ವಿರುದ್ಧ ಜೆಡಿಎಸ್​ ಕಾರ್ಯಕರ್ತರ ಪ್ರತಿಭಟನೆ

Must read

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ಅವರ ಬಳಿ ಕ್ಷಮೆ ಕೋರುವಂತೆ ಆಗ್ರಹಿಸಿ ಜೆಡಿಎಸ್​ ಕಾರ್ಯಕರ್ತರು ನಿರ್ದೇಶಕ ರಾಕ್​ಲೈನ್​ ವೆಂಕಟೇಶ್​ ಮನೆ ಬಳಿ ಪ್ರತಿಭಟನೆ ನಡೆಸಿದ್ದಾರೆ.

ಹೆಚ್​.ಡಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ಮಾತಿನ ಜಟಾಪಟಿ ನಡೆದಿದ್ದು, ಈ ಮಧ್ಯೆ ರಾಕ್​ಲೈನ್​ ವೆಂಕಟೇಶ್​ ಸುಮಲತಾ ಪರ ಬ್ಯಾಟ್​ ಬೀಸಿದ್ದರು. ಅಲ್ಲದೇ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದನ್ನು ಖಂಡಿಸಿ ಯುವ ಜನತಾದಳದ  ಕಾರ್ಯಕರ್ತರು ಮಹಾಲಕ್ಷ್ಮಿ ಲೇಔಟ್​ನಲ್ಲಿರುವ ರಾಕ್​ಲೈನ್​ ವೆಂಕಟೇಶ್ ಮನೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ರಾಕ್​ಲೈನ್​ ಚಿತ್ರರಂಗ ಹಾಳು ಮಾಡಿ ಈಗ ರಾಜಕೀಯ ಹಾಳು ಮಾಡೋಕೆ ಹೊರಟಿದ್ದಾರೆ ಎಂದು ಆಕ್ರೋಶ್​ ಹೊರಹಾಕಿದ್ದಾರೆ. ಕುಮಾರಸ್ವಾಮಿ ಅವರ ಬಳಿ ರಾಕ್​ಲೈನ್​ ಕ್ಷಮೆ ಕೇಳುವವರೆಗೂ ಪ್ರತಿಭಟನೆ ನಡೆಸೋದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ನು ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ದೌಡಾಯಿಸಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪ್ರತಿಭಟನಾ ನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Latest article