ಬೆಂಗಳೂರು: ಗಾಡಿ ಪಾರ್ಕ್ ಮಾಡುವ ವಿಚಾರಕ್ಕೆ ಆರಂಭವಾದ ಜಗಳ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಗೋದ್ರೆಜ್ ಬಳಿ ನಡೆದಿದೆ.
ಜೂನ್ 12ರಂದು ಡೆಲಿವರಿ ಬಾಯ್ ಕಾರ್ತಿಕ್ ಕೊಡಿಗೆಹಳ್ಳಿಯ ಗೋದ್ರೆಜ್ ಅಪಾರ್ಟ್ಮೆಂಟ್ಗೆ ತೆರಳಿದ್ದಾನೆ. ಈ ವೇಳೆ ಗಾಡಿ ಪಾರ್ಕ್ ಮಾಡುವ ವಿಚಾರಕ್ಕೆ ಸೆಕ್ಯುರಿಟಿ ಗಾರ್ಡ್ ಕುಮಾರ್ ನಾಯ್ಕ್ ಹಾಗೂ ಕಾರ್ತಿಕ್ ನಡುವೆ ಜಗಳ ಆರಂಭವಾಗಿದ್ದು, ಆರೋಪಿ ಸೆಕ್ಯುರಿಟಿ ಗಾರ್ಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಗಂಭೀರ ಗಾಯಗೊಂಡಿದ್ದ ಕುಮಾರ್ ನಾಯ್ಕ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ.
ಪ್ರಕರಣ ಸಂಬಂಧ ಆರೋಪಿ ಕಾರ್ತಿಕ್ನನ್ನು ಅಮೃತ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.