ಕೊಪ್ಪಳ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುತ್ತಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಲಿಂಗಾಯತ್ ಮಹಾಸಭಾ ರಾಜ್ಯಾಧ್ಯಕ್ಷ ಸರಕಾರಿ ಶಾಲೆಯಿಂದ ತಮ್ಮ ಮಗನ ಟಿಸಿ ವಾಪಸ್ ಪಡೆದಿದ್ದಾರೆ.
ಕೊಪ್ಪಳದ ನಿವಾಸಿ ವೀರಣ್ಣ ಕೋರ್ಲಹಳ್ಳಿ ಅವರು ರೈಲ್ವೆ ನಿಲ್ದಾಣದ ಬಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿರುವ ಮಗನ ವರ್ಗಾವಣೆ ಪತ್ರ ಪಡೆದು ಖಾಸಗಿ ಶಾಲೆಗೆ ಸೇರಿಸಿದ್ದಾರೆ.
ಒಂದೆರೆಡು ದಿನ ನನ್ನ ಮಗ ಮೊಟ್ಟೆ ತಿನ್ನದೆ ಇರಬಹುದು. ಬೇರೆ ಮಕ್ಕಳು ತಿನ್ನುವುದನ್ನು ನೋಡಿ ನನ್ನ ಮಗನೂ ತಿನ್ನಬಹುದು. ಇದೇ ಕಾರಣಕ್ಕೆ ಸರಕಾರಿ ಶಾಲೆ ಬಿಡಿಸಿದ್ದೇನೆ. ಸರಕಾರಿ ಶಾಲೆಯಲ್ಲಿ ಮೊಟ್ಟೆ ನೀಡುವದರಿಂದ ನನ್ನ ಧರ್ಮಕ್ಕೆ ವಿರೋಧವಿದೆ ಎಂದು ಮಗನ ಟಿಸಿ ಪಡೆದ ವಿಷಯವನ್ನು ವೀರಣ್ಣ ಕೋರ್ಲಹಳ್ಳಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.