ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ದೆಹಲಿಗೆ ಬರುವಂತೆ ಹೈ ಕಮಾಂಡ್ ಬುಲಾವ್ ನೀಡಿದೆ.
ಕೇಂದ್ರದ ಅಗ್ನಿಪಥ್ ಯೋಜನೆ ಖಂಡಿಸಿ ಕಾಂಗ್ರೆಸ್ ಬೃಹತ್ ಹೋರಾಟಕ್ಕೆ ಸಜ್ಜಾಗುತ್ತಿದ್ದು, ಪ್ರತಿಭಟನೆಯ ರೂಪುರೇಷೆ ಸಿದ್ಧಪಡಿಸಲು ಕಾಂಗ್ರೆಸ್ ಹೈ ಕಮಾಂಡ್ ಸಭೆ ಆಯೋಜಿಸಿದೆ. ದೆಹಲಿಯಲ್ಲಿ ಸಭೆ ಕರೆದಿರುವ ಹೈ ಕಮಾಂಡ್ ನಾಳೆ ಜಂತರ್ ಮಂಥರ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಎಲ್ಲಾ ಶಾಸಕರಿಗೆ ಹಾಗೂ ಎಮ್ಎಲ್ಸಿಗಳಿಗೆ ದೆಹಲಿಗೆ ಬರುವಂತೆ ವೇಣುಗೋಪಾಲ್ ಕರೆ ಮೂಲಕ ತಿಳಿಸಿದ್ದಾರೆ.
ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲು ಕೆಲವು ಶಾಸಕರು ನಿರ್ಧರಿಸಿದ್ದಾರೆ.